Expire ಮತ್ತು Renewalಗಳ ಮಧ್ಯ ಸ್ನೇಹ ಮತ್ತು ಪ್ರೀತಿ

 

ಬದುಕಿನ ಪ್ರತಿ ಸಂಭಂದವು Renewal ಆಗ್ತಾಯಿರಬೇಕು ಇಲ್ಲದೇ ಹೋದರೇ ಪ್ರತಿ ಸಂಭಂದವು Expire ಆಗಿಬಿಡುತ್ತೆ. ಎಷ್ಟೊಂದು ನಿಜವಲ್ಲವೆ? ಬದುಕಿನಲ್ಲಿ ಪ್ರತಿ ದಿನವೂ ಹೋಸ ಸಂಭಂದಗಳು ಸೃಷ್ಟಿ ಆಗ್ತಾನೆ ಹೋಗುತ್ತಿರುತ್ತವೆ, ಹಾಗೆಯೇ ಎಷ್ಟೊ ಹಳೆಯ ಸಂಭಂದಗಳು ನರಳಿಕೆಯೇ ಇಲ್ಲದೇ ಸಾಯುತ್ತಿರುತ್ತವೆ.

ಮೋನ್ನೆ ತಾನೇ ಸೇರಿದ ಕಂಪನಿಯಲ್ಲಿ ಪಕ್ಕದ Cubicalನವನ ಜೋತೆ ವಿಕೇಂಡನಲ್ಲಿ ಮೂವಿಗೆ ಹೋಗಲು ಪ್ಲಾನ ಮಾಡುವ ನಾವೇ, ಮೋನ್ನೆ ಮೋನ್ನೆಯವರೇಗೆ ಒಂದೇ ಬೆಂಚನಲ್ಲಿ ಜೋತೆಯಲ್ಲಿಯೇ ಕೂಡುತ್ತಿದ್ದ ಗೇಳೆಯನನ್ನು ಕರೆಯಲು ಮರೆಯುತ್ತೇವೆ.

ಆಫಿಸಿಗೇ ಒಂದೇ ಬಸ್ಸಿನಲ್ಲಿ ಬರುವವರಿಗೆಲ್ಲ SMS ಕಳುಹಿಸುವ ನಾವು, ಹಾಸ್ಟೇಲಿನಲ್ಲಿ ರೂಮಮೇಟ ಆಗಿದ್ದವನ ನಂಬರ ಯಾವತ್ತೋ ಡಿಲಿಟ ಅಗಿದ್ದನ್ನು ಮರೇಯುತ್ತೇವೆ. ನಾವು ನೋಡಿಯೇ ಇರದ ಕ್ಲೈಂಟಗಳಿಗೆ ಕ್ರಿಸ್ಮಸ , ನ್ಯೂ ಇಯರಗೇ e-ಮೇಲ ಕಳುಹಿಸುವ ನಾವು, ಪರಿಕ್ಷೇಯ ಸಮಯದಲ್ಲಿ ತನ್ನ ನೋಟ್ಸ ಕೊಟ್ಟು ಓದಿಸಿದ ಗೆಳೆಯನ ಪೋಸ್ಟಲ ಅಡ್ರೇಸ್ಸನ್ನೇ ಮರೇಯುತ್ತೇವೆ.

ಪ್ರತಿ ಸಂಭಂದವು ಅಷ್ಟೆ ನೀರೆರೆಯದಿದ್ದರೆ ಒಣಗಿದ ಬಳ್ಳಿಯೇ, ಹೂವು ಅರಳದು, ಕಂಪು ಹರಡದು.

ಗೆಳೆತನವೆಂಬುದು ಬಳ್ಳಿಯಿದ್ದಂತೆ ಅದು ಏಷ್ಟೆ ಬೆಳೆದರು ನೀರು ಹಾಕದಿದ್ದರೇ ಬಾಡುವುದೆ. ಹಾಗಾದರೇ ನಮ್ಮ ಗೆಳೆತನದ ಬಳ್ಳಿಗೆ ನೀರೆರೆಯೋಣ , ಮತ್ತೆ Reneval ಮಾಡೋಣ, Expiry Date ಸಮೀಪೀಸ್ತಾಯಿದೆ. ಗೆಳೆಯಾ, ನಾನಿಲ್ಲಿ ನಿನ್ನ e-ಮೇಲ ಹಾದಿಯನ್ನೆ ಕಾಯ್ತಾ ಕುಳಿತಿದ್ದೀನಿ ಅನ್ಕೊಬೇಡ, ನಾನೀಗ ನಿನ್ನ ನಂಬರನ್ನೇ ಡೈಯಲ್ ಮಾಡ್ತಯಿದ್ದೇನೆ.

2 Responses to “Expire ಮತ್ತು Renewalಗಳ ಮಧ್ಯ ಸ್ನೇಹ ಮತ್ತು ಪ್ರೀತಿ”


  1. 1 Sangaraj June 20, 2009 at 11:02 am

    “ಗೆಳೆತನವೆಂಬುದು ಬಳ್ಳಿಯಿದ್ದಂತೆ ಅದು ಏಷ್ಟೆ ಬೆಳೆದರು ನೀರು ಹಾಕದಿದ್ದರೇ ಬಾಡುವುದೆ.”
    Salugalu chennagive, Sorry not familiar with kannada keyboard

  2. 2 ಶೆಟ್ಟರು (Shettaru) July 6, 2009 at 3:05 pm

    ಸಂಗರಾಜ,

    ಧನ್ಯವಾದಗಳು, Quillpad ಅಥವಾ kannadaslate.com ಬಳಸಿ

    -ಶೆಟ್ಟರು


Leave a Reply




a

ಕನ್ನಡ ಹನಿಗಳು

Blog Stats

  • 6,231 hits

ಕೆಂಡಸಂಪಿಗೆಯಲ್ಲಿ “ಮೆಚ್ಚುಗೆ”ಯ ಮಾತುಗಳು

ದಿನದ ಬ್ಲಾಗ್ - ಶೆಟ್ಟರ ಒಂದಿಷ್ಟು ಕನಸುಗಳು ಜಿತೇಂದ್ರ ಮಂಗಳವಾರ, 8 ಜುಲೈ 2008 (10:11 IST) ಶೆಟ್ಟರ ಒಂದಿಷ್ಟು ಕನಸುಗಳು ‘ಜಂಗಮ ಮತ್ತು ಸ್ಥಾವರಗಳ ನಡುವಿನ ಹೊಯ್ದಾಟ: ಮಾತು, ಮೌನ, ಕನವರಿಕೆ ಇದೇ ಬದುಕು' ಅನ್ನೋದು ಶೆಟ್ಟರ ವಾದ.ಕನಸು ಕಾಣುವುದಲ್ಲಿ ಇವರು ನಿಸ್ಸೀಮರು ಅಂತ ಇಲ್ಲಿರುವ ಒಂದಿಷ್ಟು ಕನಸುಗಳೇ ಹೇಳುತ್ತಿವೆ. ಇಲ್ಲಿ ಈಗಷ್ಟೆ ಕಳೆದುಹೋದವನ ನೆನಪಿನ ಮಳೆಯಲ್ಲಿ ನೆನೆದ ಗುರುತಿದೆ. ಮನಸ್ಸಿಗೆ ಆಪ್ತವಾಗುವಂತ ಸರಳ ಶೈಲಿಯಲ್ಲಿಯೇ ಲೇಖಕರು ಎಲ್ಲವನ್ನು ನಿರೂಪಿಸುತ್ತಾ ಹೋಗಿದ್ದಾರೆ. ಬಾಗಲಕೋಟೆ ಹೋಳಿಯ ಸವಿ ನೆನಪು, ಹೀಗೂ ಒಂದು (ಆತ್ಮ)ಕಥೆ ಮುಂತಾದ ಲೇಖನಗಳು ಓದುತ್ತಲೇ ಇಷ್ಟವಾಗುತ್ತವೆ. ನಡುವೆ ಮುಂಬಯಿ ಬದುಕಿನ ಕಥೆ-ವ್ಯಥೆಗಳಿವೆ. ಜೊತೆಗೆ ಒಂದಿಷ್ಟು ಕವನ ರಸಾಯನ. ಇದೆನ್ನೆಲ್ಲ ಸವಿಯಬೇಕಿದ್ದವರು ಇಲ್ಲಿಗೊಮ್ಮೆ ಹೋಗಿ ಬನ್ನಿ.

ಕನ್ನಡಪ್ರಭದ ‘ಬ್ಲಾಗ್ ಬುಟ್ಟಿ’ಯಲ್ಲಿ ನನ್ನದು ಒಂದು ಹಣ್ಣು- ಪು.ಸಂ. ೫, “ಸಾಪ್ತಾಹಿಕ ಪ್ರಭ”, ರವಿವಾರ, ೨೦ ಜುಲೈ ‘೦೮

ಕನಸು, ಕವನ, ಲಹರಿ, ನೆನಪು.. ಎಲ್ಲವೂ ಸೇರಿ ಶೆಟ್ಟರ 'ಒಂದಿಷ್ಟು ಕನಸು' ಬ್ಲಾಗ್ ರೂಪುಗೊಂಡಿದೆ. 'ಜಂಗಮ ಮತ್ತು ಸ್ಥಾವರಗಳ ನಡುವಿನ ಹೊಯ್ದಾಟ: ಮಾತು, ಮೌನ, ಕನವರಿಕೆ ಇದೇ ಬದುಕು' ಎನ್ನುವ ಶೆಟ್ಟರು ಇಲ್ಲಿ ಮುಂಬಯಿ ಬದುಕಿನ ಕಥೆ-ವ್ಯಥೆಗಳನ್ನೂ ಪೋಣಿಸಿಕೊಟ್ಟಿದ್ದಾರೆ. ಸರಳವಾಗಿ, ಓದಿಸಿಕೊಂಡು ಹೋಗುವಂತೆ ಬರೆಯುವ ಶೆಟ್ಟರ ಬ್ಲಾಗನ ಒಂದು ಬರಹ ಇಲ್ಲಿದೆ.