ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ – ಏಪ್ರಿಲ್ ೨೩, ೨೦೦೯

wbcd_kanನಾಳೆ ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ (ಇದನ್ನು ಅಂತರಾಷ್ಟ್ರೀಯ ಪುಸ್ತಕ ದಿನ ಎಂದೂ ಕರೆಯುತ್ತಾರೆ). ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ (UNESCO) 1995ರಲ್ಲಿ ಮೊದಲ ಬಾರಿಗೆ ಓದುವಿಕೆ (Reading), ಪ್ರಕಾಶನ (Publisher) ಮತ್ತು ಕೃತಿಸ್ವಾಮ್ಯ (CopyRight) ದ ಬಗ್ಗೆ ಅರಿವು ಮತ್ತು ಪ್ರಚಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿತು. ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯುನೇಸ್ಕೋ ಯುವಜನತೆಯಲ್ಲಿ ಪುಸ್ತಕ ಪ್ರೇಮ, ಓದಿನ ಖುಷಿ (ಖುಷಿಗಿಂತ ಗಮ್ಮತ್ತು..) ಹೆಚ್ಚಿಸುವ ಮತ್ತು ಉತ್ತಮ ಲೇಖಕನ್ನು ಗೌರವಿಸುವ ಹಂಬಲ್ ಹೊಂದಿದೆ. ನೂರಕ್ಕೂ ಹೆಚ್ಚು ರಾಷ್ಟ್ರಗಳು ಮತ್ತು ವಿಶ್ವಾದ್ಯಂತ ಅನೇಕಾನೇಕ ಪುಸ್ತಕ ಪ್ರಕಾಶಕರು, ಪುಸ್ತಕ ವ್ಯಾಪಾರಿಗಳು, ಗ್ರಂಥಾಲಯಗಳು, ಶಾಲಾ-ಕಾಲೇಜು-ವಿಶ್ವವಿದ್ಯಾಲಯಗಳು, ಸಾಂಶ್ಕೃತಿಕ ಸಂಘಟನೆಗಳು ಮತ್ತು ಸಾಹಿತ್ಯಿಕ/ ಸಾಹಿತಿಗಳ ವೇದಿಕೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಸ್ತಕ ಮತ್ತು ಓದುವಿಕೆಯ ಮಹತ್ವ ಸಾರಲಿವೆ.

ಈ ದಿನ ಆಂಗ್ಲ ಸಾಹಿತ್ಯದ ಮಹಾನ್ ಸಾಹಿತಿ ವಿಲ್ಲಿಯಮ್ ಷೇಕ್ಸಪೀಯರನ ಜನ್ಮದಿನ, ಈ ದಿನವನ್ನು “ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ” ಆಚರಿಸುವುದರ ಮೂಲಕ ವಿಶ್ವದ ಎಲ್ಲ ಮಹಾನ್ ಕೃತಿಗಳಿಗೆ ಮತ್ತು ಕೃತಿಕಾರರಿಗೆ ಗೌರವ ಸಮರ್ಪನೆ ಮಾಡಲಾಗುತ್ತದೆ ಮತ್ತು ಅವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಕೊಡುಗೆಗಳನ್ನು ನೆನಪಿಸಿಕೊಳ್ಳಲಾಗುವುದು.

“Not all readers are leaders, but all leaders are readers.”
- Harry S. Truman

ಹೆಚ್ಚಿನ ಮಾಹೀತಿಗೆ: ಯುನೇಸ್ಕೋ ಅಂತರ್ಜಾಲ ಪುಟ

0 Responses to “ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ – ಏಪ್ರಿಲ್ ೨೩, ೨೦೦೯”



  1. No Comments Yet

Leave a Reply




a

Blog Stats

  • 8,400 hits

ಕೆಂಡಸಂಪಿಗೆಯಲ್ಲಿ “ಮೆಚ್ಚುಗೆ”ಯ ಮಾತುಗಳು

ದಿನದ ಬ್ಲಾಗ್ - ಶೆಟ್ಟರ ಒಂದಿಷ್ಟು ಕನಸುಗಳು ಜಿತೇಂದ್ರ ಮಂಗಳವಾರ, 8 ಜುಲೈ 2008 (10:11 IST) ಶೆಟ್ಟರ ಒಂದಿಷ್ಟು ಕನಸುಗಳು ‘ಜಂಗಮ ಮತ್ತು ಸ್ಥಾವರಗಳ ನಡುವಿನ ಹೊಯ್ದಾಟ: ಮಾತು, ಮೌನ, ಕನವರಿಕೆ ಇದೇ ಬದುಕು' ಅನ್ನೋದು ಶೆಟ್ಟರ ವಾದ.ಕನಸು ಕಾಣುವುದಲ್ಲಿ ಇವರು ನಿಸ್ಸೀಮರು ಅಂತ ಇಲ್ಲಿರುವ ಒಂದಿಷ್ಟು ಕನಸುಗಳೇ ಹೇಳುತ್ತಿವೆ. ಇಲ್ಲಿ ಈಗಷ್ಟೆ ಕಳೆದುಹೋದವನ ನೆನಪಿನ ಮಳೆಯಲ್ಲಿ ನೆನೆದ ಗುರುತಿದೆ. ಮನಸ್ಸಿಗೆ ಆಪ್ತವಾಗುವಂತ ಸರಳ ಶೈಲಿಯಲ್ಲಿಯೇ ಲೇಖಕರು ಎಲ್ಲವನ್ನು ನಿರೂಪಿಸುತ್ತಾ ಹೋಗಿದ್ದಾರೆ. ಬಾಗಲಕೋಟೆ ಹೋಳಿಯ ಸವಿ ನೆನಪು, ಹೀಗೂ ಒಂದು (ಆತ್ಮ)ಕಥೆ ಮುಂತಾದ ಲೇಖನಗಳು ಓದುತ್ತಲೇ ಇಷ್ಟವಾಗುತ್ತವೆ. ನಡುವೆ ಮುಂಬಯಿ ಬದುಕಿನ ಕಥೆ-ವ್ಯಥೆಗಳಿವೆ. ಜೊತೆಗೆ ಒಂದಿಷ್ಟು ಕವನ ರಸಾಯನ. ಇದೆನ್ನೆಲ್ಲ ಸವಿಯಬೇಕಿದ್ದವರು ಇಲ್ಲಿಗೊಮ್ಮೆ ಹೋಗಿ ಬನ್ನಿ.

ಕನ್ನಡಪ್ರಭದ ‘ಬ್ಲಾಗ್ ಬುಟ್ಟಿ’ಯಲ್ಲಿ ನನ್ನದು ಒಂದು ಹಣ್ಣು- ಪು.ಸಂ. ೫, “ಸಾಪ್ತಾಹಿಕ ಪ್ರಭ”, ರವಿವಾರ, ೨೦ ಜುಲೈ ‘೦೮

ಕನಸು, ಕವನ, ಲಹರಿ, ನೆನಪು.. ಎಲ್ಲವೂ ಸೇರಿ ಶೆಟ್ಟರ 'ಒಂದಿಷ್ಟು ಕನಸು' ಬ್ಲಾಗ್ ರೂಪುಗೊಂಡಿದೆ. 'ಜಂಗಮ ಮತ್ತು ಸ್ಥಾವರಗಳ ನಡುವಿನ ಹೊಯ್ದಾಟ: ಮಾತು, ಮೌನ, ಕನವರಿಕೆ ಇದೇ ಬದುಕು' ಎನ್ನುವ ಶೆಟ್ಟರು ಇಲ್ಲಿ ಮುಂಬಯಿ ಬದುಕಿನ ಕಥೆ-ವ್ಯಥೆಗಳನ್ನೂ ಪೋಣಿಸಿಕೊಟ್ಟಿದ್ದಾರೆ. ಸರಳವಾಗಿ, ಓದಿಸಿಕೊಂಡು ಹೋಗುವಂತೆ ಬರೆಯುವ ಶೆಟ್ಟರ ಬ್ಲಾಗನ ಒಂದು ಬರಹ ಇಲ್ಲಿದೆ.

ಕನಸಿಗೆ ಬಂದವರು